Product Description
೧೯೯೧ರಲ್ಲಿ ತಮ್ಮ ಸಿರಿ ಸಂಪಿಗೆಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದುಕೊಂಡಿರುವ ಡಾ. ಚಂದ್ರಶೇಖರ ಕಂಬಾರರು ರಾಷ್ಟ್ರಮಟ್ಟದಲ್ಲಿ ಕನ್ನಡದ ಸಿದ್ಧಿ-ಸಾಧನೆಗಳನ್ನು ಎತ್ತಿ ಹಿಡಿದಿರುವ ಹಾಗೂ ಅದರ ಪ್ರತೀಕವಾಗಿರುವ ಪ್ರಮುಖ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕಾವ್ಯ, ನಾಟಕ, ಕಾದಂಬರಿ ಮತ್ತು ಜಾನಪದ ಕ್ಷೇತ್ರಗಳಲ್ಲಿ ಮಹತ್ವದ ಕೃತಿಗಳನ್ನು ಕಾಣಿಕೆಯಾಗಿತ್ತಿರುವುದು ಮಾತ್ರವಲ್ಲದೆ, ತಮ್ಮ ಆಯ್ಕೆಯ ಈ ಎಲ್ಲ ಕ್ಷೇತ್ರಗಳಿಗೆ ಹೊಸ ಆಯಾಮವನ್ನು ಜೋಡಿಸಿದ ಹಿರಿಮೆಯೂ ಅವರದಾಗಿದೆ. ತಮ್ಮ ಸಾಹಿತ್ಯ ಕೃತಿಗಳಿಗಾಗಿ ಹಲವಾರು ರ್ಟ್ರಾಯ ಪ್ರಶಸ್ತಿಗಳನ್ನು ಗಳಿಸಿದ ಅವರು ಸಿನಿಮಾ ಕ್ಷೇತ್ರವನ್ನು ಪ್ರವೇಶಿಸಿದಾಗಲೂ ಅದೇ ವಿಕ್ರಮವನ್ನು ಮೆರೆದಿದ್ದಾರೆ. ಕನ್ನಡ ವಿಶ್ವವಿದ್ಯಾನಿಲಯದ ಪ್ರಥಮ ಕುಲಪತಿಗಳಾಗಿದ್ದ ಅವರ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಾಧನೆಗಳು ಕನ್ನಡ ನಾಡಿಗೇ ಹೆಮ್ಮೆಯನ್ನು ತರುವಂಥ ಸಂಗತಿಗಳಾಗಿವೆ. ಜಾನಪದ ಮತ್ತು ಸಂಶೋಧನ ಕ್ಷೇತ್ರಗಳತ್ತ ವಿಶೇಷ ಒಲವುಳ್ಳ ಹಾಗೂ ಕನ್ನಡ ಅಧ್ಯಪಕರಾಗಿರುವ ಡಾ|| ಬಸವರಾಜ ಮಲಶೆಟ್ಟಿ ಈ ಪುಸ್ತಕದ ಲೇಖಕರು.