Select Size
Quantity
Product Description
ಇದು ಅನುವಾದ ಕೃತಿಯಾಗಿದ್ದು, ಚಂದ್ರಕಾಂತ ಪೋಕಳೆ ಅವರು ಅನುವಾದ ಮಾಡಿದ್ದಾರೆ. ರಾಮಾಯಣ ಮತ್ತು ಮಹಾಭಾರತದ ನಡುವಿನ ಅಂತರ್ ಸಂಬಂಧದ ಬೇರುಗಳನ್ನು ತಡಕಾಡುತ್ತದೆ. ಈ ಕೃತಿಯ ಮೂಲಕ ಸ್ಥಾಪಿತಗೊಂಡ ಧರ್ಮವನ್ನು ಅವರು ವಿಶ್ಲೇಷಿಸುತ್ತಾರೆ. ಮಹಾಭಾರತದ ಕುರಿತಂತೆ ಬರೆಯುತ್ತಾ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ರಾಜಮನೆತನದ ತಲೆಮಾರಿನ ನಿಖರ ಇತಿಹಾಸ ಮತ್ತು ಕೆಲವು ಹಳೆಯ ಚರಿತ್ರೆ ಎಂದು ಅಭಿಪ್ರಾಯ ಪಡುವ ಅವರು, ರಾಮಾಯಣವು ಕೆಲವು ಜಾನಪದ ಕಥೆ ಮತ್ತು ಕೆಲವು ಅದ್ಭುತ ಕತೆಗಳ ಸಮ್ಮಿಶ್ರವಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಮಹಾಭಾರತಕ್ಕಿಂತ ಮುನ್ನವೇ ರಾಮಾಯಣ ಜಾನಪದ ರೂಪದಲ್ಲಿ ಜನರ ನಡುವೆ ಅಸ್ತಿತ್ವದಲ್ಲಿದ್ದುದನ್ನೂ ಅವರು ಗುರುತಿಸುತ್ತಾರೆ. ಮಹಾಭಾರತದಲ್ಲಿ ಆರಂಭದಿಂದ ಕೊನೆಯವರೆಗೂ ನಡೆಯುವ ಸಂಘರ್ಷ ಮನುಷ್ಯ ಪಾತಳಿಯದ್ದು ಮತ್ತು ಕೌಟುಂಬಿಕವಾದುದು. ರಾಮಾಯಣ ಕೌಟುಂಬಿಕವಾದರೂ ಅದರಾಚೆಗಿನ ಹಲವು ಪೇಚುಗಳು, ಗೊಂದಲಗಳ ನಡುವೆ ಮುಂದುವರಿಯುತ್ತದೆ. ಮಹಾಭಾರತ ಮತ್ತು ರಾಮಾಯಣ ಹಿಂಸೆಯ ಕುರಿತಂತೆ ತಳೆದಿರುವ ನಿಲುವುಗಳಲ್ಲಿನ ವ್ಯತ್ಯಾಸವನ್ನೂ ಕುತೂಹಲಕರವಾಗಿ ಮಂಡಿಸಲಾಗಿದೆ. ರಾಮಾಯಣದ ಅಯೋಧ್ಯಾಕಾಂಡದಲ್ಲಿ ಕಾಡಿಗೆ ಹೊರಡುವ ರಾಮನ ಚಿತ್ರಗಳು, ಭರತಭಾವಗಳನ್ನು ಕಟ್ಟಿಕೊಡುತ್ತಾ, ಈ ಸಂದರ್ಭದಲ್ಲಿ ದಶರಥ, ಕೌಸಲ್ಯಾ ಮೊದಲಾದ ಪಾತ್ರಗಳ ಅಭಿವ್ಯಕ್ತಿಗಳನ್ನು ಮನಃಶ್ಯಾಸ್ತ್ರೀಯ ನೆಲೆಯಲ್ಲಿ ಈ ಕೃತಿಯಲ್ಲಿ ವಿಶ್ಲೇಷಿಸಲಾಗಿದೆ.
Number of Pages
155
Binding
Soft Bound
Publication Year
2016
Author
Chandrakanth Pokale
Publisher
Nava Karnataka Publications Pvt Ltd
Width
14 CMS
Height
2 CMS
Weight
200 GMS
Length
22 CMS
Language
Kannada