Quantity
Product Description
ಈ ಕೃತಿಯ ಓದು ಒಂದು ನೃತ್ಯೋತ್ಸವದ ಆನಂದವನ್ನು ನೀಡಿತು. ಒಬ್ಬರಿಗಿಂತ ಒಬ್ಬರು ನಾಟ್ಟಪ್ರತಿಭಾ ದಿಗ್ಗಜರ ಜೊತೆಗಿನ ಮಾತುಕತೆ ಮಾತ್ರವಲ್ಲ, ಅವರೆಲ್ಲರ ಮೂಲಕ ನೃತ್ಯಕಲಾ ಜಗತ್ತಿನ ಸಮಗ್ರ ಅನಾವರಣವನ್ನು ರಾಜಲಕ್ಷ್ಮಿ ಕೋಡಿಬೆಟ್ಟು ಮಾಡಿದ್ದಾರೆ. ಸಮಗ್ರವಾಗಿರುವುದು ಕೇವಲ ಇಪ್ಪತ್ತು ಅನನ್ಯ ಸಾಧಕರ ಯಶಸ್ಸಿನಿಂದಷ್ಟೇ ಅಲ್ಲ ನೃತ್ಯಕಲಾವಿದರೆಲ್ಲರ ಒಳಗನ್ನು ಬಗೆದು ತೆಗೆದ ನಿವೇದನೆಗಳ ಸುರಳೀತ ನಿರೂಪದಲ್ಲಿ ವಿವಿಧ ನೃತ್ಯಕಲಾ ಪರಂಪರೆಗಳು, ಗುರುದೀಕ್ಷೆ ಮತ್ತು ಗುರುಯಣಗಳು, ಕೆಲಿತ ಮತ್ತು ಕಟ್ಟಿದ ಕಲಾಸಂಸ್ಥೆಗಳು, ಭಿನ್ನ ಪ್ರಕಾರಗಳ ನಡುವಿನ ಕೊಡುಕೊಳ್ಳುವಿಕೆ, ಪ್ರಭಾವ, ಅಂತರ್ ಸಂಬಂಧಗಳ ಲೋಕ ತೆರೆದುಕೊಳ್ಳುತ್ತದೆ. ದೇವಾಲಯಗಳ ಸೆರೆಯಲ್ಲಿದ್ದ ಕಲೆಯ ಮುತ್ತಿತಥನ, ದೈವಿಕ ಮತ್ತು ಆಧ್ಯಾತ್ಮಿಕ ನಂಬಿಕೆ, ಪ್ರಾಚೀನ ಮತ್ತು ಆಧುನಿಕ ಕಾವ್ಯ ನೃತ್ಯಾವತಾರ ತಳೆಯುವ ಸಂಗತಿಗಳಿವೆ. ಶಾಸ್ತ್ರಿಯ ಧಾರೆಯ ಹಿನ್ನೆಲೆಯಲ್ಲಿ ಆಯಾ ಪ್ರದೇಶಗಳ ಬುಡಕಟ್ಟು, ಜಾನಪದ ಮತ್ತು ದೇಸೀ ಮೂಲಗಳ ಅನುಸಂಧಾನವಿರುವ ಅಂತ ಹೆಮ್ಮೆಯುಂಟುಮಾಡುತ್ತದೆ.
ನೃತ್ಯಕಲಾ ಕಥನ ಕಟ್ಟಿಕೊಟ್ಟಿರುವ ಕಲಾವಿದರ ವೈಯಕ್ತಿಕ ಬದುಕಿನ ವಿವಿಧ ವಿನ್ಯಾಸಗಳು ಬಿಚ್ಚಿಕೊಳ್ಳುತ್ತವೆ; ಹೃದಯಸ್ಪರ್ತಿ (ರಾಜಾ ರಾಧಾ ರೆಡ್ಡಿ), ಕಷ್ಟ ಸಹಿಷ್ಣುತೆ (ನರ್ತಕಿ ನಟರಾಜ್), ಧೋರಣೆ, ದಾರುಣತೆ (ಸೂರಿಕುಮೇರು ಗೋವಿಂದ ಭಟ್ಟ), ಕಲಾದೃಷ್ಟಿ ಮತ್ತು ಕಲಾಸೃಷ್ಟಿ (ಸೋನಲ್ ಮಾನ್ ಸಿಂಗ್), ಪ್ರಯೋಗಶೀಲತೆ (ಮಂಜರಿ ಚತುರ್ವೇದಿ) - ಹೀಗೆ ನೃತ್ಯಕಲಾವಿದರ ಕಲಾನುಭವ ಮತ್ತು ಲೋಕದೃಷ್ಟಿಗಳು ಓದುಗರನ್ನು ಅಚ್ಚರಿ ಮತ್ತು ತಲ್ಲಣಗಳಿಗೆ ದೂಡುತ್ತದೆ.
ಮಾತುಕತೆ ಅಥವಾ ಸಂದರ್ಶನವೆಂಬುದು ಒಂದು ಸೂತ್ರವಷ್ಟೆ. ಆದರೆ ಇಲ್ಲಿ ತೆರೆದುಕೊಂಡಿರುವ ಜಗತ್ತು ವಿಸ್ಮಯವುಂಟುಮಾಡುತ್ತದೆ. ಇಲ್ಲಿನ ಮಾತುಕತೆಯೊಂದರಲ್ಲಿ. ಇಬ್ಬರು ನರ್ತಕಿಯರು ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಲ್ಲಿ ಇಷ್ಟಪಟ್ಟುಕೊಂಡು ತೊಯ್ದು ತೊಪ್ಪೆಯಾಗುತ್ತಾರೆ. ಈ ಪುಸ್ತಕವನ್ನು ಓದುತ್ತಿರುವಾಗ ನಾನೂ ಅವರ ಜೊತೆಗಿದ್ದೆ ಅನಿಸುತ್ತಿದೆ. ಇದು ಕಲಾಸಕ್ತರು ಮಾತ್ರ ಓದಬೇಕಾದ ಪುಸ್ತಕವಲ್ಲ ಎಂದು ನಾನು ತಿಳಿಯುತ್ತೇನೆ.
Binding
Soft Bound
Author
Kodibetta Rajalakshmi
Number of Pages
200
Publisher
Aharnishi Prakashana
Publication Year
2025
Height
2 CMS
Weight
200 GMS
Width
14 CMS
Language
Kannada