Select Size
Quantity
Product Description
ಕೆ.ಟಿ.ಗಟ್ಟಿ. ಅವರು ಸಾಹಿತ್ಯ ಕ್ಷೇತ್ರವನ್ನು ಪ್ರವೇಶಿಸಿದ್ದು, 1956ರಲ್ಲಿ “ಮುಂಗಾರ ಮುಗಿಲು' ಎಂಬ ಒಂದು ಚಿಕ್ಕ ಕತೆಯ ಮೂಲಕ. ಆಗ ಅವರಿಗೆ ಹದಿನೆಂಟು ವರ್ಷ. ಅನಂತರ ಸುಮಾರು ಹದಿನೈದು ವರ್ಷ ತನ್ನ ಓದಿನ ನಡುವೆ ಬೇರೆ ಬೇರೆ ದಿನ ಪತ್ರಿಕೆ, ವಾರ ಪತ್ರಿಕೆ, ಮಾಸ ಪತ್ರಿಕೆಗಳಲ್ಲಿ ಅವರ ಕತೆ, ಕವಿತೆ ಮತ್ತು ಲೇಖನಗಳು ಪ್ರಕಟವಾಗುತ್ತಿದ್ದವು. ಕೆ.ಟಿ.ಗಟ್ಟಿಯವರ ಮೊದಲ ಕಾದಂಬರಿ 'ಶಬ್ದಗಳು' ಪ್ರಕಟವಾದದ್ದು 1973ರಲ್ಲ. ಕಾದಂಬರಿ ಬರವಣಿಗೆಯಲ್ಲದೆ, ಸಣ್ಣ ಕತೆ, ಕಾವ್ಯ, ಪ್ರಬಂಧ, ನಾಟಕ, ಬಾನುಲಿ ನಾಟಕ, ಪ್ರವಾಸ ಕಥನ, ಮಕ್ಕಳ ಸಾಹಿತ್ಯ, ಅನುವಾದ, ಭಾಷಾ ಶಾಸ್ತ್ರ, ಶಿಕ್ಷಣ ಮುಂತಾದ ವಿವಿಧ ಪ್ರಕಾರಗಳಲ್ಲಿ ಕನ್ನಡದಲ್ಲ, ಇಂಗ್ಲಿಷಿನಲ್ಲಿ ಮತ್ತು ತುಳುಭಾಷೆಯಲ್ಲಿ ಗಟ್ಟಿಯವರ ನೂರಕ್ಕೂ ಹೆಚ್ಚು ಕೃತಿಗಳು ಪ್ರಕಟವಾಗಿವೆ. ಅವರ “ಕತೆ ಇನ್ನೂ ಇದೆ', 'ಅನುಭವದಡಿಗೆಯ ಮಾಡಿ' ಮತ್ತು ತಾಳಮದ್ದಳೆ' ಎಂಬ ಮೂರು ಬಾನುಲಿ ಸರಣಿ ನಾಟಕಗಳು ಬಹಳ ಪ್ರಸಿದ್ದ. ಗಟ್ಟಯವರ ಆತ್ಮ ಕಥೆ ''ತೀರ' ಒಂದು ವಿಶಿಷ್ಟ ಕೃತಿಯಾಗಿದೆ.
Author
K T Gatti
Binding
Soft Bound
ISBN-13
9789387192096
Number of Pages
368
Publication Year
2018
Publisher
Ankitha Pusthaka
Height
4 CMS
Length
22 CMS
Weight
400 GMS
Width
14 CMS
Language
Kannada